ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಉಡುಪಿ

ಕರಾವಳಿಯಲ್ಲಿ ಈ ಬಾರಿ ದಾಖಲೆಯ ಉಷ್ಣಾಂಶ ಏರಿಕೆ ಸಾಧ್ಯತೆ..!ಹವಾಮಾನ‌ ಇಲಾಖೆಯಿಂದ ಎಚ್ವರಿಕೆ..!

B
Babu
Feb 17, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ದ.ಕ/ಉಡುಪಿ/ಉ.ಕ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಬೇಸಿಗೆಯ ಅಬ್ಬರ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೇಸಿಗೆಯ ಆರಂಭದಲ್ಲೇ ಹೆಚ್ವಿನ ತಾಪಮಾನ‌ ದಾಖಲಾಗುತ್ತಿದ್ದು ಇನ್ನೂ ಹೆಚ್ಚಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ 33°C ರಿಂದ 36°C ವರೆಗೆ ತಾಪಮಾನ ಹೆಚ್ಚಾಗಲಿದ್ದು, ಸಮುದ್ದತೀರದಲ್ಲಿನ ಹೆಚ್ಚಿನ ಆರ್ದ್ರತೆಯಿಂದ ಬಿಸಿಲಿನ ಶಾಖ ಇನ್ನಷ್ಟು ಹೆಚ್ಚು ಅನುಭವಕ್ಕೆ ಬರಲಿದೆ.

ಬಿಸಿಲಿಗೆ ಹೋಗುವಾಗ ಎಚ್ಚರ…!

ಅತಿಹೆಚ್ಚಿನ ತಾಪಮಾನಕ್ಕೆ ನೇರವಾಗಿ ಮೈಯೊಡ್ಡುವುದು ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಸಾಧ್ಯತೆಯಿರುವುದರಿಂದ, ನೇರವಾಗಿ ಮಧ್ಯಾಹ್ನನ್ನದ ಹೊತ್ತಿಗೆ ಬಿಸಿಲಿಗೆ ಹೋಗದಂತೆ ಸಲಹೆ ನೀಡಿದೆ. ಸಾಕಷ್ಟು ನೀರು ಸೇವನೆಯ ಜೊತೆಗೆ ಹೆಚ್ಚು ನೀರಿನಂಶ ಹೊಂದಿರುವ ಆಹಾರ ಸೇವನೆ ಸ್ವಲ್ಪ ಮಟ್ಟಿಗಿನ ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ.

ಬಿಸಿಲಿನ‌ ನಡುವೆಯೂ ಮಳೆಯ ಮುನ್ಸೂಚನೆ.

ಮಾರ್ಚ್ ಎರಡನೇ ಅರ್ಧದಿಂದ ಏಪ್ರಿಲ್ ತಿಂಗಳ ಅವಧಿಯಲ್ಲಿ ಕರಾವಳಿ ಭಾಗಗಳಲ್ಲಿ ಪೂರ್ವಮಾನ್ಸೂನ್ ಮಳೆಯಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇವು ಚಿಕ್ಕ ಅವಧಿಯ ಮಳೆಯಾಗಿದ್ದರೂ ತಾಪಮಾನದಿಂದ ತಾತ್ಕಾಲಿಕ ರಿಲೀಫ್ ನೀಡುವ ಸಾಧ್ಯತೆ ಇದೆ. ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಹಾಗೂ ಬಲವಾದ ಗಾಳಿಯ ಸಂದರ್ಭಗಳಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವಾಗ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಪ್ರವಾಸಿಗರ ಸುರಕ್ಷತೆ.

ಬೇಸಿಗೆಯಲ್ಲಿ ಕರಾವಳಿ ಪ್ರವಾಸೋದ್ಯಮ ಕೇಂದ್ರಗಳಾದ ಕುಂದಾಪುರ, ಉಡುಪಿ, ಮಲ್ಪೆ, ಪಣಂಬೂರು ಹಾಗೂ ಕಾರವಾರ ಕಡಲತೀರಗಳಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು, ಪ್ರವಾಸಿಗರು ಬಿಸಿಲು ಮತ್ತು ಆರ್ದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *