ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಕುಂದಾಪುರ

ಕರ್ನಾಟಕದಲ್ಲಿ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ.‌‌.!?ಕರ್ನಾಟಕ ಸರ್ಕಾರದ ಮಹತ್ವದ ಚಿಂತನೆ..!

B
Babu
Feb 22, 2026 · 2 ನಿಮಿಷ

Screenshot

Spread the love

ಬೆಂಗಳೂರು: ರಾಜ್ಯದಲ್ಲಿನ ಹದಿಹರೆಯದ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. 16 ವರ್ಷದೊಳಗಿನ ಮಕ್ಕಳಿಗೆ ಸ್ಮಾರ್ಟ್‌ಫೋನ್ ಬಳಕೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ.

ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಆರೋಗ್ಯ ಹಾಗೂ ಶೈಕ್ಷಣಿಕ ಪ್ರಗತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವುದು ಗಮನಕ್ಕೆ ಬಂದಿರುವುದಾಗಿ ಆತಂಕ ವ್ಯಕ್ತಪಡಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಕೊಳ್ಳುವಿಕೆ, ಆನ್‌ಲೈನ್ ಗೇಮ್‌ಗಳ ವ್ಯಸನ, ಸುಲಭದ ತುತ್ತಾಗಿರುವ ಅಶ್ಲೀಲ ಮತ್ತು ಅನಗತ್ಯ ವಿಷಯಗಳಿಂದಾಗಿ ಮಕ್ಕಳು ದಾರಿ ತಪ್ಪುತ್ತಿರುವುದನ್ನು ಸರ್ಕಾರ ಗಂಭೀರ ಸಮಸ್ಯೆಯಾಗಿ ಪರಿಗಣಿಸಿದೆ ಎಂದು ಹೇಳಿದರು.

ಶಾಲಾ ಮಕ್ಕಳಲ್ಲಿ ಮೊಬೈಲ್ ಬಳಕೆಯಿಂದ
– ಅಧ್ಯಯನದಲ್ಲಿ ನಿರಾಸಕ್ತಿ
– ನಿದ್ರಾಹೀನತೆ
– ಮಾನಸಿಕ ಒತ್ತಡ ಹಾಗೂ ಖಿನ್ನತೆ
– ಸಾಮಾಜಿಕ ಸಂಬಂಧಗಳಿಂದ ದೂರವುಳಿಯುವಿಕೆ.
ಹಾಗೂ ದುಶ್ಚಟಗಳತ್ತ ಆಕರ್ಷಣೆ ಹೆಚ್ಚುತ್ತಿರುವುದರ ಬಗ್ಗೆ ಶಿಕ್ಷಣ ತಜ್ಞರು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರವು ಶಾಲಾ ಆವರಣದಲ್ಲಿ ಮೊಬೈಲ್ ಬಳಕೆಗೆ ನಿರ್ಬಂಧ, ಪೋಷಕರ ಜವಾಬ್ದಾರಿಯನ್ನು ಹೆಚ್ಚಿಸುವ ಮಾರ್ಗಸೂಚಿ ಬಿಡುಗಡೆ, ಮಕ್ಕಳಿಗೆ ಅಗತ್ಯವಿರುವ ಡಿಜಿಟಲ್ ಬಳಕೆಗೆ ಮಿತಿ ಹೇರುವುದು
ಇವುಗಳ ಬಗ್ಗೆ ಸ್ಪಷ್ಟ ನೀತಿ ರೂಪಿಸುವ ಚಿಂತನೆ ನಡೆಸುತ್ತಿದೆ.

ಈ ವಿಷಯದ ಬಗ್ಗೆ ಶಿಕ್ಷಣ ಇಲಾಖೆ, ಅಧಿಕಾರಿಗಳು, ತಜ್ಞರು ಹಾಗೂ ಪೋಷಕರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಮಕ್ಕಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಇನ್ನು ಸರ್ಕಾರದ ಈ ಚಿಂತನೆಗೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದನ್ನು ಸ್ವಾಗತಿಸಿದರೆ, ಮತ್ತೊಂದು ವರ್ಗ ಮಕ್ಕಳು ತಂತ್ರಜ್ಞಾನದಿಂದ ಸಂಪೂರ್ಣ ದೂರವಾಗಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ.ರೂಪಿಸುವ ಚಿಂತನೆ ನಡೆಸುತ್ತಿದೆ.

ಈ ವಿಷಯದ ಕುರಿತು ಶಿಕ್ಷಣ ಇಲಾಖೆ, ತಜ್ಞರು ಹಾಗೂ ಪೋಷಕರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಮಕ್ಕಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ತುರ್ತು ಅಗತ್ಯವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಇನ್ನು ಸರ್ಕಾರದ ಈ ಚಿಂತನೆಗೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದ್ದು, ಕೆಲವರು ಇದನ್ನು ಸ್ವಾಗತಿಸಿದರೆ, ಇನ್ನು ಕೆಲವರಿಂದ ಮಕ್ಕಳು ತಂತ್ರಜ್ಞಾನದಿಂದ ಸಂಪೂರ್ಣ ದೂರವಾಗಬಾರದು ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Leave a Reply

Your email address will not be published. Required fields are marked *