ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಕುಂದಾಪುರ

ಕುಂದಾಪುರ ಸಮೀಪ‌ ಮಗುಚಿದ ಮೀನುಗಾರಿಕಾ ದೋಣಿ. ಐವರು ಮೀನುಗಾರರು ಅಪಾಯದಿಂದ ಪಾರು.

B
Babu
Feb 26, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ಕುಂದಾಪುರ. ಫೆ26 : ಮೀನುಗಾರಿಕಾ ದೋಣಿಯೊಂದು ಕುಂದಾಪುರ ಸಮೀಪದಲ್ಲಿ ಅರಬ್ಬೀ ಸಮುದ್ರದಲ್ಲಿ ಮುಳುಗಿದ ಘಟನೆ ನಡೆದಿದೆ. ಫೆಬ್ರವರಿ 23 ರ ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕಿಳಿದಿದ್ದ ದೋಣಿಗೆ ಫೆಬ್ರವರಿ 24 ರಂದು ಕೆಳಭಾಗಕ್ಕೆ ಯಾವುದೋ ವಸ್ತು ಬಡಿದ ಪರಿಣಾಮ ಎಂಜಿನ್ ಕೋಣೆಗೆ ನೀರು ನುಗ್ಗಿದೆ. ದೋಣಿಯ ಸಿಬ್ಬಂದಿ ಕೈಯಿಂದ ನೀರನ್ನು ಹೊರಹಾಕಲು ಪಟ್ಟ ಪ್ರಯತ್ನ ವಿಫಲವಾಗಿ ಎಂಜಿನ್ ಕಾರ್ಯನಿರ್ವಣೆ ನಿಂತಿದ್ದು, ಅಪಾಯವನ್ನರಿತ ಮೀನುಗಾರರು ಸಹಾಯಕ್ಕಾಗಿ ಮೊರೆ ಹೋದರು.

ರಕ್ಷಣಾ ಕಾರ್ಯ ನಡೆದಿದ್ದು ಹೇಗೆ‌..!

ಮುಳುಗುತ್ತಿದ್ದ ದೋಣಿಯ ಸಮೀಪದಲ್ಲಿಯೇ ಇದ್ದ ‘ ಶ್ರೀ ಕೃಷ್ಣ ’ ದೋಣಿಯ ಮೀನುಗಾರರು ತಕ್ಷಣವೇ ಆಗಮಿಸಿ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿಯ ಸಹಾಯದೊಂದಿಗೆ ಐವರನ್ನೂ ರಕ್ಷಣೆ ಮಾಡಿದರು.

ಹಾನಿಯಾಗಿದ್ದ ದೋಣಿಯನ್ನು ಸುಮಾರು 8-9 ನಾಟಿಕಲ್ ಮೈಲು ದೂರದವರೆಗೂ ಹಗ್ಗದ ಸಹಾಯದಿಂದ ಎಳೆಯಲಾಯಿತಾದರೂ ತೀವ್ರ ಪ್ರಕ್ಷುಬ್ಧ ವಾತಾವರಣವಿದ್ದ ಕಾರಣ ಹಗ್ಗ ತುಂಡಾಗಿ ದೋಣಿ‌ಸಂಪೂರ್ಣವಾಗಿ ಮುಳುಗಿದೆ.

ಮುಳುಗಿದ “ಶ್ರೀ ದುರ್ಗಾಪರಮೇಶ್ವರಿ” ದೋಣಿಯು ಕೆಮ್ಮಣ್ಣು ಮೂಲದ ನಾಗರಾಜ್ ಪುತ್ರನ್ ಅವರಿಗೆ ಸೇರಿದ್ದೆಂದು ತಿಳಿದು ಬಂದಿದೆ. ಮಾಲಿಕರಿಗೆ ಅಂದಾಜು 60-65 ಲಕ್ಷ ರೂ ನಷ್ಟ ಸಂಭವಿಸಿದೆ.
ಈ ಕುರಿತು ಗಂಗೊಳ್ಳಿಯ ಕರಾವಳಿ ಭದ್ರತಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *