Popular Posts

ರಣಜಿ ಸೆಮಿಫೈನಲ್ ಲಕ್ನೋದಲ್ಲಿ : ಕರ್ನಾಟಕ–ಉತ್ತರಾಖಂಡ ಮುಖಾಮುಖಿ

Spread the love

ರಣಜಿ ಟ್ರೋಫಿ 2025-26 ರ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಉತ್ತರಾಖಂಡ ತಂಡಗಳು ಫೆಬ್ರವರಿ 15ರಿಂದ 19ರವರೆಗೆ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಉತ್ತರಾಖಂಡದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದರೂ, ಪ್ರಸಾರ ವ್ಯವಸ್ಥೆ ಮತ್ತು ಮೈದಾನದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಕ್ನೋಗೆ ಸ್ಥಳಾಂತರಿಸಲಾಗಿದೆ. ಕರ್ನಾಟಕ ತಂಡವನ್ನು ದೇವದತ್ತ ಪಡಿಕ್ಕಲ್ ನಾಯಕತ್ವದಲ್ಲಿ ಪ್ರಕಟಿಸಲಾಗಿದ್ದು, ಮಯಾಂಕ್ ಅಗರವಾಲ್ ಹಾಗೂ ಕೆ.ಎಲ್. ರಾಹುಲ್ ಸೇರಿದಂತೆ ಅನುಭವಿ ಆಟಗಾರರು ತಂಡದಲ್ಲಿದ್ದಾರೆ.

Leave a Reply

Your email address will not be published. Required fields are marked *