1
1
30 ರಿಂದ 35 ಸಾವಿರ ಪ್ರೇಕ್ಷಕರಿಗೆ ಅವಕಾಶ ನೀಡಲು ಸರ್ಕಾರದ ಸೂಚನೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ಕರ್ನಾಟಕ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.
ಈ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳನ್ನು ಆಯೋಜಿಸುವುದಕ್ಕೆ ಒಪ್ಪಿಗೆ ನೀಡಲಾಗಿದ್ದು, ಪಂದ್ಯಗಳಿಗೆ ಪ್ರೇಕ್ಷಕರ ಪ್ರವೇಶಕ್ಕೂ ಅನುಮತಿ ನೀಡಲು ತೀರ್ಮಾನಿಸಲಾಗಿದೆ.

ಸರ್ಕಾರವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಗೆ ಪಂದ್ಯಗಳ ವೇಳೆ ಸುಮಾರು 30 ರಿಂದ 35 ಸಾವಿರ ಪ್ರೇಕ್ಷಕರಿಗೆ ಮಾತ್ರ ಪ್ರವೇಶ ಕಲ್ಪಿಸುವಂತೆ ಸೂಚಿಸಿದೆ.
ಭದ್ರತೆ, ಸಂಚಾರ ವ್ಯವಸ್ಥೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
RCB ತಂಡದ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿಯಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಭಿಮಾನಿಗಳ ಘೋಷಣೆ ಕೇಳಿಸುವ ನಿರೀಕ್ಷೆ ಹೆಚ್ಚಾಗಿದೆ. IPL ಪಂದ್ಯಾವಳಿಯು ಬೆಂಗಳೂರಿನಲ್ಲಿ ನಡೆಯುವುದರಿಂದ ನಗರದ ಪ್ರವಾಸೋದ್ಯಮ ಹಾಗೂ ವ್ಯಾಪಾರ ವಲಯಕ್ಕೂ ಲಾಭವಾಗಲಿದೆ ಎನ್ನಲಾಗಿದೆ.
ಪಂದ್ಯಗಳ ವೇಳಾಪಟ್ಟಿ ಹಾಗೂ ಟಿಕೆಟ್ ಮಾರಾಟದ ಕುರಿತು ಶೀಘ್ರದಲ್ಲೇ KSCA ಹಾಗೂ IPL ಆಯೋಜಕರು ಅಧಿಕೃತ ಮಾಹಿತಿ ಪ್ರಕಟಿಸುವ ಸಾಧ್ಯತೆ ಇದೆ.