ನಾಳೆ ಬ್ರಹ್ಮಾವರದಲ್ಲಿ ‘ಅಭಿಮತ ಸಂಭ್ರಮ’ ಕಾರ್ಯಕ್ರಮ
ಕುಂದಾಪುರ, ಫೆ.13:
ಜನಸೇವಾ ಟ್ರಸ್ಟ್ ಗಿಳಿಯಾರು ಆಶ್ರಯದಲ್ಲಿ ಆಯೋಜಿಸಿರುವ ‘ಅಭಿಮತ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮವು ಫೆಬ್ರವರಿ 14ರಂದು ಸಂಜೆ 6 ಗಂಟೆಗೆ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಆರಂಭದಲ್ಲಿ ನೃತ್ಯ ವಸಂತ ನಾಟ್ಯಾಲಯ ಕುಂದಾಪುರ ಇವರ ಆಶ್ರಯದಲ್ಲಿ ನೃತ್ಯೋಪಾಸನೆ ಕಾರ್ಯಕ್ರಮ ನಡೆಯಲಿದೆ. ಬಳಿಕ ಮುಂಬಯಿ ನಿವೃತ್ತ ಎ.ಸಿ.ಪಿ ದಯಾ ನಾಯಕ್ ಅವರಿಗೆ ಅಭಿಮತ ಕೀರ್ತಿ ಕಲಶ ಗೌರವದೊಂದಿಗೆ ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಜನಪದ ವಿದ್ಯಾಂಸ ಬನ್ನಂಜೆ ಬಾಬು ಅಮೀನ್, ಸೂಲಗಿತ್ತಿ ಲಕ್ಷ್ಮೀ ಪೂಜಾರಿ, ಯಶಸ್ವಿ ಕಲಾವೃಂದ ತೆಕ್ಕಟ್ಟೆ ಸಂಸ್ಥೆಗಳಿಗೆ ಯಶೋಗಾಥೆ ಗೌರವ ಸನ್ಮಾನ ಮಾಡಿ ಗೌರವಿಸಲಾಗುವುದು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಚಿತ್ರನಟ ರಿಷಭ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಳ್ವಾಸ್ನ ಡಾ. ಮೋಹನ್ ಆಳ್ವ, ಡಾ. ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಪ್ರಸಿದ್ಧ ಹಿನ್ನಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ತಂಡದಿಂದ ‘ಸಿಂಗಾರ ಸಿರಿ’ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ನಿರೂಪಕಿ ಅನುಶ್ರೀಯವರು ವಹಿಸಲಿದ್ದಾರೆ ಎಂದು ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Just logged into fg777login and felt like sharing. The signup process was smooth, and I was playing in no time. Good selection of slots if that’s your thing! Give it a try fg777login!
Hey guys, saw a few people talking about jili30login. I signed up myself last week and so far, so good! The interface is clean and easy to navigate. Worth checking out jili30login.
Feeling lucky? I tried my hand at lucky22 the other day. It’s got a decent atmosphere, and I appreciated the variety of game options. See if you get lucky lucky22!